Bible Study: FrontPage




 

Ecclesiastes, Chapter 10

Bible Study - Ecclesiastes 10 - Kannada - Kannada Bible - Web
 
 
 
Comment!       Comment Disqus!
  
1. ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
  
2. ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
  
3. ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
  
4. ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
  
5. ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
  
6. ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
  
7. ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
  
8. ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
  
9. ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
  
10. ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
  
11. ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
  
12. ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
  
13. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
  
14. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
  
15. ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
  
16. ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
  
17. ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
  
18. ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
  
19. ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.
  
20. ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.


Search in:
Terms:

Vote and Comment on Facebook:Recommend This Page:
Post on Facebook Add to your del.icio.us Digg this story StumbleUpon Twitter Google Plus Post on Tumblr Add to Reddit Pin this story Linkedin Google Bookmark Blogger
Insert Your Personal Insight:

Please do not make mean comments and follow the biblical and spiritual character of this forum. If, however unpleasant situations arise, we request to flag it to us in order to evaluate the situation.

Text source: This text is in the public domain.

This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com


SELECT VERSION

COMPARE WITH OTHER BIBLES