Bible Study: FrontPage




 

Mark, Chapter 13

Bible Study - Mark 13 - Kannada - Kannada Bible - Web
 
 
 
Comment!       Comment Disqus!
  
1. ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
  
2. ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
  
3. ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
  
4. ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
  
5. ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
  
6. ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
  
7. ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
  
8. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
  
9. ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
  
10. ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
  
11. ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
  
12. ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
  
13. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
  
14. ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
  
15. ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
  
16. ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
  
17. ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
  
18. ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
  
19. ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
  
20. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
  
21. ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
  
22. ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
  
23. ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
  
24. ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
  
25. ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
  
26. ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
  
27. ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
  
28. ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
  
29. ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
  
30. ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  
31. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
  
32. ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
  
33. ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
  
34. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
  
35. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
  
36. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.
  
37. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.


Search in:
Terms:

Vote and Comment on Facebook:Recommend This Page:
Post on Facebook Add to your del.icio.us Digg this story StumbleUpon Twitter Google Plus Post on Tumblr Add to Reddit Pin this story Linkedin Google Bookmark Blogger
Insert Your Personal Insight:

Please do not make mean comments and follow the biblical and spiritual character of this forum. If, however unpleasant situations arise, we request to flag it to us in order to evaluate the situation.

Text source: This text is in the public domain.

This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com


SELECT VERSION

COMPARE WITH OTHER BIBLES